ಬೆಂಗಳೂರು : ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಕರ್ನಾಟಕಕ್ಕೆ ಆದೇಶ ಹೊರಡಿಸಿದ್ದು, ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದೆ.
ಈ ಹಿನ್ನೆಲೆ ನಾಳೆ ಅ.13 ರಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ ನಿಗದಿಯಾಗಿದೆ. ಸಭೆಯಲ್ಲಿ ಎರಡೂ ರಾಜ್ಯದ ಅಧಿಕಾರಿಗಳು ಭಾಗಿಯಾಗಲಿದ್ದು, ‘CWRC’ಆದೇಶ ಪ್ರಶ್ನಿಸಿ ಕರ್ನಾಟಕ ನಾಳೆ ಸಭೆಯಲ್ಲಿ ವಾದ ಮಂಡಿಸಲಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿನ್ನೆ ಸಭೆ ನಡೆಸಿ ಮತ್ತೆ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ ಕಾಲ ಬಿಡುವಂತೆ ಸೂಚನೆ ನೀಡಿದೆ. ಮುಂದಿನ ವಾರದಿಂದ ತಮಿಳುನಾಡಿಗೆ ವಾಯುವ್ಯ ಮಾರುತಗಳಿಂದ ಮಳೆಯಾಗಲಿದ್ದು, ಅಲ್ಲಿನ ನೀರಿನ ಸಮಸ್ಯೆ ನಿವಾರಣೆ ಆಗುತ್ತದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರೆದಿರುವುದರಿಂದ ನೀರು ಬಿಡುವುದು ಕಷ್ಟವಾಗುತ್ತದೆ ಎಂದು ರಾಜ್ಯದ ಅಧಿಕಾರಿಗಳು ವಾದ ಮಂಡಿಸಿದ್ದರು.ಆದರೂ ಕೂಡ ಆದೇಶದಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ.