alex Certify BIG NEWS: ಅಮಿತ್ ಶಾ, ನಡ್ಡಾ ಹೆಸರಲ್ಲಿ ರಾಜ್ಯಸಭೆ ಸದಸ್ಯ ಸ್ಥಾನ ಕೊಡಿಸುವುದಾಗಿ ವಂಚನೆ: ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮಿತ್ ಶಾ, ನಡ್ಡಾ ಹೆಸರಲ್ಲಿ ರಾಜ್ಯಸಭೆ ಸದಸ್ಯ ಸ್ಥಾನ ಕೊಡಿಸುವುದಾಗಿ ವಂಚನೆ: ಆರೋಪಿ ಅರೆಸ್ಟ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಯುವರಾಜ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ತನಗೆ ಗಣ್ಯರ ಪರಿಚಯವಿದೆ ಎಂದು ಹೇಳಿಕೊಳ್ಳುತ್ತಿದ್ದ ಯುವರಾಜ್ ರಾಜ್ಯಸಭೆ ಸದಸ್ಯತ್ವ ಸೇರಿದಂತೆ ಪ್ರಮುಖ ಹುದ್ದೆಗಳನ್ನು ಕೊಡಿಸುವುದಾಗಿ ವಂಚಿಸುತ್ತಿದ್ದ ನಾಗರಬಾವಿಯಲ್ಲಿರುವ ಯುವರಾಜ್ ನಿವಾಸದ ಮೇಲೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು 26 ಲಕ್ಷ ರೂಪಾಯಿ ನಗದು ಮತ್ತು 91 ಕೋಟಿ ರೂಪಾಯಿ ಮೊತ್ತದ ಚೆಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಉದ್ಯಮಿ ಸುಧೀಂದ್ರ ರೆಡ್ಡಿ ಅವರಿಗೆ ರಾಜ್ಯಸಭೆಯ ಸದಸ್ಯತ್ವ ಕೊಡಿಸುವುದಾಗಿ 10 ಕೋಟಿ ರೂಪಾಯಿಗೆ ವ್ಯವಹಾರ ಕುದುರಿಸಿದ್ದ ಆರೋಪಿ 1 ಕೋಟಿ ರೂಪಾಯಿ ಮುಂಗಡ ಪಡೆದುಕೊಂಡಿದ್ದ. ತನಗೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ಪರಿಚಯವಿದ್ದಾರೆ ಎಂದು ಆರೋಪಿ ಹೇಳಿದ್ದು, ಆತನ ಮಾತು ನಂಬಿದ ಉದ್ಯಮಿ ಹಣ ಕೊಟ್ಟಿದ್ದರು. ವಂಚನೆಗೊಳಗಾದ ಬಳಿಕ ಪೊಲೀಸರಿಗೆ ದೂರು ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...