alex Certify ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ..? ಯುವತಿಗೆ ಎಸ್ಐಟಿಯಿಂದ ಮತ್ತೆ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ..? ಯುವತಿಗೆ ಎಸ್ಐಟಿಯಿಂದ ಮತ್ತೆ ವಿಚಾರಣೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿಯಿಂದ ಯುವತಿ ವಿಚಾರಣೆ ನಡೆಸಲಾಗುವುದು.

ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ವಂಚನೆ ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ವಿಡಿಯೋದಲ್ಲಿ ಆರೋಪ ಮಾಡಿದ್ದರು. ಈ ಕುರಿತಾಗಿ ಜಡ್ಜ್ ಮತ್ತು ಎಸ್ಐಟಿ ಎದುರು ಅವರು ಹಾಜರಾಗಿ ಹೇಳಿಕೆ ನೀಡಿದ್ದಾರೆ.

ಇಂದು ಮತ್ತೆ ಯುವತಿಯ ವಿಚಾರಣೆ ನಡೆಯಲಿದೆ. ಯುವತಿ ನೀಡಲಿರುವ ಹೇಳಿಕೆ, ಒದಗಿಸಲಿರುವ ಸಾಕ್ಷ್ಯ ಆಧರಿಸಿ ಎಸ್ಐಟಿ ಮುಂದಿನ ಕ್ರಮಕೈಗೊಳ್ಳಲಿದೆ. ಈ ಬೆಳವಣಿಗೆಗಳಿಂದ ರಮೇಶ್ ಜಾರಕಿಹೊಳಿ ಕಾನೂನು ತಜ್ಞರೊಂದಿಗೆ ಮುಂದಿನ ಕ್ರಮಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...