alex Certify BIG NEWS: ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು, ಸಿಡಿಯಲ್ಲಿದ್ದ ಯುವತಿಯಿಂದಲೇ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು, ಸಿಡಿಯಲ್ಲಿದ್ದ ಯುವತಿಯಿಂದಲೇ ಹೊಸ ಬಾಂಬ್

ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ನೀಡಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. ಸಿಡಿಯಲ್ಲಿದ್ದ ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಗೃಹಸಚಿವರಿಗೆ ರಕ್ಷಣೆ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ವಿಡಿಯೋವನ್ನು ಹೇಗೆ ಮಾಡಿದರು ಎನ್ನುವುದು ನನಗೆ ಗೊತ್ತಿಲ್ಲ. ನನ್ನ ಮಾನ ಮರ್ಯಾದೆ ಊರುತುಂಬ ಹರಾಜಾಗಿದೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನನ್ನ ಅಪ್ಪ-ಅಮ್ಮ ಕೂಡ ಹಲವು ಸಲ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಮ್ಮ ಹಿಂದೆ ಯಾರೂ ಇಲ್ಲ. ಯಾವ ರಾಜಕೀಯದವರು ಇಲ್ಲ ಎಂದು ಆಕೆ ಹೇಳಿಕೊಂಡಿದ್ದಾಳೆ.

ಕೆಲಸ ಕೊಡಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಈಗ ಅವರೇ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ ಎಂದು ಯುವತಿ ಹೇಳಿದ್ದು, ರಕ್ಷಣೆಗಾಗಿ ಗೃಹಸಚಿವರಿಗೆ ಮನವಿ ಮಾಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...