alex Certify BIG NEWS: ವೃತ್ತಿಪರ ಕೋರ್ಸ್ ಸಿಇಟಿ ಕೌನ್ಸೆಲಿಂಗ್ ಗೆ ಜ.15 ರವರೆಗೆ ಕಾಲಾವಕಾಶ ಕೋರಿ ಎಐಸಿಟಿಇ ಗೆ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೃತ್ತಿಪರ ಕೋರ್ಸ್ ಸಿಇಟಿ ಕೌನ್ಸೆಲಿಂಗ್ ಗೆ ಜ.15 ರವರೆಗೆ ಕಾಲಾವಕಾಶ ಕೋರಿ ಎಐಸಿಟಿಇ ಗೆ ಪತ್ರ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಮಾಡುವ ಅಗತ್ಯ ಇದ್ದು, ಜನವರಿ 15 ರವರೆಗೆ ಅವಕಾಶ ನೀಡಬೇಕು ಎಂದು ಕೋರಿ ಉನ್ನತ ಶಿಕ್ಷಣ ಇಲಾಖೆಯು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ (ಎಐಸಿಟಿಇ) ಅಧ್ಯಕ್ಷರಿಗೆ ಪತ್ರ ಬರೆದಿದೆ.

ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಉಳಿದಿರುವ ವೃತ್ತಿಪರ ಕೋರ್ಸ್ ಗಳ ಸೀಟ್ ಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಸಲ, ಕೊನೆಯದಾಗಿ ಅವಕಾಶ ನೀಡಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಇದರ ಜೊತೆಗೆ, ಕರ್ನಾಟಕ ಅನುದಾನರಹಿತ ಖಾಸಗಿ ಶೈಕ್ಷಣಿಕ ಕಾಲೇಜುಗಳ ಸಂಸ್ಥೆ (ಕೆಯುಪಿಇಸಿಎ) ಕೂಡ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ 15 ರವರೆಗೆ ಕಾಲಾವಕಾಶ ವಿಸ್ತರಿಸಲು ಕೋರಿದೆ. ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪತ್ರ ಬರೆಯಲಾಗಿದೆ ಎಂದು ವಿವರಿಸಿದ್ದಾರೆ.

ಈ ಹಿಂದಿನ ಅನುಮತಿಯ ಪ್ರಕಾರ, ವೃತ್ತಿಪರ ಕೋರ್ಸ್ ಗೆ ಪ್ರವೇಶ ಪಡೆಯಲು 31-12- 2020 ಕೊನೆಯ ದಿನವಾಗಿದೆ. ಆದರೆ, ಯುಜಿ ಸಿಇಟಿ ಮಾಪ್ ಅಪ್ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಪಡೆದಿದ್ದ ಕೆಲವು ವಿದ್ಯಾರ್ಥಿಗಳು, ಸೀಟು ಹಿಂಪಡೆದು ಶುಲ್ಕ ಮರುಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಸೋಮವಾರ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದ್ದರು.

ಎಂಜಿನಿಯರಿಂಗ್ ಬದಲು ಆಯುಷ್, ಬಿ.ಎಸ್ಸಿ., ಬಿ.ಕಾಂ., ಅಥವಾ ಇನ್ನಿತರ ಕೋರ್ಸ್ ಗಳನ್ನು ಓದಲು ಇಚ್ಛಿಸುತ್ತೇವೆ. ಆಯುಷ್ ಕೋರ್ಸ್  ಗಳಿಗೆ ಇನ್ನೂ ಕೌನ್ಸೆಲಿಂಗ್ ನಡೆಸಿಲ್ಲ. ಆದ್ದರಿಂದ ಎಂಜಿನಿಯರಿಂಗ್ ಸೀಟು ಹಿಂದಕ್ಕೆ ಪಡೆದು ಅನುಕೂಲವಾಗುತ್ತದೆ ಎಂದೂ ವಿದ್ಯಾರ್ಥಿಗಳು ಹೇಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...