alex Certify ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳಲು ಖತರ್ನಾಕ್ ಕೃತ್ಯ: ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳಲು ಖತರ್ನಾಕ್ ಕೃತ್ಯ: ಆರೋಪಿ ಅರೆಸ್ಟ್

ಬೆಂಗಳೂರು: ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುವ ಸಲುವಾಗಿ ಸರ ಕದಿಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಉಮೇಶ್ ಬಂಧಿತ ಆರೋಪಿ. ಈತ ವಿಮಾನದಲ್ಲಿ ಬೆಂಗಳೂರಿಗೆ ಬಂದು ಮೊದಲಿಗೆ ಬೈಕ್ ಕಳವು ಮಾಡುತ್ತಿದ್ದ. ಕದ್ದ ಬೈಕ್ ನಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಚಿನ್ನದಸರ ದೋಚುತ್ತಿದ್ದ. ಬೆಂಗಳೂರಿನಲ್ಲಿ ಡಿಸೆಂಬರ್ ನಲ್ಲಿ ಒಂದೇ ದಿನ ಮೂರು ಕಡೆ ಚಿನ್ನದ ಸರ ಕಳವು ಮಾಡಿದ್ದ. ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆ, ಪುಟ್ಟೇನಹಳ್ಳಿ ಮತ್ತು ಮಾರತಹಳ್ಳಿ ಭಾಗದಲ್ಲಿ ಸರ ಕಳವು ಮಾಡಿದ ಆರೋಪಿ ಹೈದರಾಬಾದ್ ನಲ್ಲಿಯೂ ಕೃತ್ಯ ಮುಂದುವರೆಸಿದ್ದ.

ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸಿದ್ದು, ರಾಜಸ್ಥಾನಕ್ಕೆ ತೆರಳಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುವ ಉದ್ದೇಶದಿಂದ ಹೈದರಾಬಾದ್ ನಲ್ಲಿ 8, ಬೆಂಗಳೂರಿನಲ್ಲಿ 7 ಹಾಗೂ ರಾಜಸ್ಥಾನದಲ್ಲಿ 18 ಚಿನ್ನದ ಸರಗಳನ್ನು ದೋಚಿದ್ದಾನೆ.

ಅಪ್ರಾಪ್ತೆ ಮದುವೆಯಾಗಿ ಪೊಕ್ಸೋ ಕಾಯ್ದೆಯಡಿ ಜೈಲು ಸೇರಿದ್ದ ಆರೋಪಿ ಜೈಲಿನಿಂದ ಬಂದ ನಂತರ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳಲು ಸರ ಕದಿಯುತ್ತಿದ್ದ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆನ್ನಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...