alex Certify ‘ಸರಳ ವಾಸ್ತು’ ಚಂದ್ರಶೇಖರ ಗುರೂಜಿ ಹತ್ಯೆ ರಹಸ್ಯ ತಿಳಿಯಲು ಆರೋಪಿಗಳಿಗೆ ಮಂಪರು ಪರೀಕ್ಷೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸರಳ ವಾಸ್ತು’ ಚಂದ್ರಶೇಖರ ಗುರೂಜಿ ಹತ್ಯೆ ರಹಸ್ಯ ತಿಳಿಯಲು ಆರೋಪಿಗಳಿಗೆ ಮಂಪರು ಪರೀಕ್ಷೆ…?

ಹುಬ್ಬಳ್ಳಿ: ‘ಸರಳ ವಾಸ್ತು’ ಮೂಲಕ ಮನೆ ಮಾತಾಗಿದ್ದ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ.

ಗುರೂಜಿ ಹತ್ಯೆಯಲ್ಲಿ ಇಬ್ಬರು ಆರೋಪಿಗಳಲ್ಲದೇ, ಬೇರೆಯವರ ಕೈವಾಡವು ಇರಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ -ಧಾರವಾಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳ ಪೊಲೀಸ್ ಕಸ್ಟಡಿ ಸೋಮವಾರ ಅಂತ್ಯವಾಗಲಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಅವರನ್ನು ಪೊಲೀಸ್ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಚಂದ್ರಶೇಖರ ಗುರೂಜಿ ಹತ್ಯೆ ಹಿಂದೆ ಮತ್ತೆ ಯಾರಿದ್ದಾರೆ? ಆಸ್ತಿಯ ವಿಚಾರವೇ ಕೊಲೆಗೆ ಕಾರಣವೇ? ಅಥವಾ ಬೇರೆ ಏನಾದರೂ ಇದೆಯೇ ಎಂಬುದನ್ನು ಪತ್ತೆ ಹಚ್ಚಲು ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ತನಿಖಾಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...