alex Certify ನಿಜವಾಯ್ತು ‘ಚಂದ್ರಯಾನ-3’ ಸಕ್ಸಸ್ ಬಗ್ಗೆ ‘ಕೋಡಿಮಠದ ಶ್ರೀ’ ನುಡಿದಿದ್ದ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಜವಾಯ್ತು ‘ಚಂದ್ರಯಾನ-3’ ಸಕ್ಸಸ್ ಬಗ್ಗೆ ‘ಕೋಡಿಮಠದ ಶ್ರೀ’ ನುಡಿದಿದ್ದ ಭವಿಷ್ಯ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬುಧವಾರದಂದು ತನ್ನ ಚಂದ್ರಯಾನ -3 ಯಶಸ್ವಿಯಾಗಿ ಪೂರೈಸಿದ್ದು, ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ದೇಶವೇ ಕೊಂಡಾಡುತ್ತಿದೆ.

ಚಂದ್ರಯಾನ-3’ ಸಕ್ಸಸ್ ಬಗ್ಗೆ ‘ಕೋಡಿಮಠದ ಶ್ರೀ’ ನುಡಿದಿದ್ದ ಭವಿಷ್ಯ ನಿಜವಾಗಿದೆ. ಭಾರತದ ಚಂದ್ರಯಾನ-3 ಮಿಷನ್ ಯಶಸ್ವಿಯಾಗುತ್ತೆಯಂದು ‘ಕೋಡಿಮಠದ ಶ್ರೀ’ ಗಳು ಭವಿಷ್ಯ ನುಡಿದಿದ್ದರು. ಇದೀಗ ‘ಕೋಡಿಮಠದ ಶ್ರೀ’ ನುಡಿದಿದ್ದ ಭವಿಷ್ಯ ನಿಜವಾಗಿದೆ.

ಅದೇ ರೀತಿ ಶ್ರಾವಣಮಾಸದ ಮಧ್ಯಂತರ ಭಾಗದಲ್ಲಿ ಭಾರೀ ಮಳೆಯಿಂದ ಜಲಪ್ರಳಯ, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶ ಆಗುತ್ತದೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಹೇಳಿದ್ದಾರೆ.ಪ್ರಕೃತಿಯಲ್ಲಿ ವಿಷಾನಿಲ ಬೀಸುವ ಪ್ರಸಂಗವೂ ಇದ್ದು, ಜಾಗತಿಕ ಮಟ್ಟದಲ್ಲಿ ವಿಷಾನಿಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಾಗಲಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತೀಯ ಚಂದ್ರಯಾನವನ್ನು ಯಶಸ್ವಿಯಾಗಿ ಇಳಿಸಿದ್ದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಚಂದ್ರಯಾನ-3 ಯಶಸ್ವಿಗೆ ಅಮೆರಿಕ ಮತ್ತು ಜಪಾನ್ ಕೂಡ ಭಾರತಕ್ಕೆ ಅಭಿನಂದನೆ ಸಲ್ಲಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...