alex Certify BIG BREAKING: ಸರ್ಕಾರದ ಮಹತ್ವದ ನಿರ್ಧಾರ; ಜೆಜೆ ನಗರ ಚಂದ್ರು ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಲು CM ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸರ್ಕಾರದ ಮಹತ್ವದ ನಿರ್ಧಾರ; ಜೆಜೆ ನಗರ ಚಂದ್ರು ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಲು CM ಸೂಚನೆ

ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಜೆ ನಗರದ ಚಂದ್ರು ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಸೂಚಿಸಿರುವುದಾಗಿ ಹೇಳಿದ್ದಾರೆ.

ಚಂದ್ರು ಕೊಲೆ ಪ್ರಕರಣ ರಾಜಕೀಯ ಆರೋಪ-ಪ್ರತ್ಯಾರೋಪ ಗಳಿಗೆ ಕಾರಣವಾಗಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು, ನಿನ್ನೆ ಡಿಜಿ ಐಜಿಪಿ ಮತ್ತು ಕಮಿಷನರ್ ಕರೆದು ಮಾತನಾಡಿದ್ದೇನೆ. ಆರೋಪ-ಪ್ರತ್ಯಾರೋಪ ಏನೇ ಇರಲಿ, ಸತ್ಯ ಹೊರಗೆ ಬರಲಿ ಎನ್ನುವ ಉದ್ದೇಶದಿಂದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...