ಕೊಲಂಬೊ: ಶ್ರೀಲಂಕಾ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸ್ವಾತಂತ್ರ್ಯ ಪಡೆದ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಭೀಕರ ಆರ್ಥಿಕ ಬಿಕ್ಕಟ್ಟು ಸಂಭವಿಸಿದ್ದು, ರಾಜೀನಾಮೆಗೆ ಒತ್ತಡ ಹೆಚ್ಚಾದ ಕಾರಣ ರಾಜೀನಾಮೆ ಸಲ್ಲಿಸಿದ್ದಾರೆ. ಶ್ರೀಲಂಕಾದ ಆರೋಗ್ಯ ಸಚಿವ ಪ್ರೊ.ಚನ್ನ ಜಯಸುಮನ ಕೂಡ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸಿದ್ದಾರೆ.
ಶುಕ್ರವಾರ ನಡೆದ ಸಭೆಯಲ್ಲಿ ಅಧ್ಯಕ್ಷ ಗೊಟಬಯಾ ರಾಜಪಕ್ಸೆ, ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ರಾಜೀನಾಮೆ ನೀಡುವಂತೆ ಪ್ರಧಾನಿಗೆ ಸಲಹೆ ನೀಡಿದ್ದರು. ಈ ಸಭೆ ನಡೆದು ಎರಡು ದಿನಗಳ ನಂತರ ರಾಜೀನಾಮೆ ನೀಡಿದ್ದಾರೆ.
ಮಹಿಂದಾ ರಾಜಪಕ್ಸೆ ಅವರ ರಾಜೀನಾಮೆಯ ನಂತರ, ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು, ಸಚಿವರು ಸೇರಿದಂತೆ ಸರ್ವಪಕ್ಷಗಳ ಸಚಿವ ಸಂಪುಟವನ್ನು ರಚಿಸಲು ಆಹ್ವಾನಿಸುವ ನಿರೀಕ್ಷೆ ದಟ್ಟವಾಗಿದೆ.
ಸೋಮವಾರ ಬೆಳಗ್ಗೆ ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ಎದುರು ಪ್ರತಿಭಟನೆ ನಡೆಸಿ, ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡದಂತೆ ಒತ್ತಾಯಿಸಿದ್ದರು.