alex Certify BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು ಬುಧವಾರ ಅಥವಾ ಗುರುವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ತನಿಖೆ ಪೂರ್ಣಗೊಳಿಸಿದ ಪೊಲೀಸರು ಚಾರ್ಜ್ ಶೀಟ್ ಸಿದ್ಧಪಡಿಸಿದ್ದು, ಖುದ್ದು ಕಮಿಷನರ್ ಅವರಿಂದಲೇ ದೋಷಾರೋಪ ಪಟ್ಟಿ ಪ್ರತಿಗಳ ಪರಿಶೀಲನೆ ನಡೆಸಲಾಗಿದೆ. ಸಾಕ್ಷ್ಯ, ಎಫ್ಎಸ್ಎಲ್ ವರದಿ ಸೇರಿ ಪ್ರತಿಯೊಂದು ಕೂಡ ಕೊಲೆಗೆ ಪೂರಕವಾಗಿವೆ. 4,800ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆ ಇದೆ.

ರೇಣುಕಾಸ್ವಾಮಿ ಹತ್ಯೆಯ ಕುರಿತಾಗಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಿದ್ದಪಡಿಸಲಾಗಿದೆ. ಕೆಲವೊಂದು ಅಂಶಗಳ ಕುರಿತಾಗಿ ಎಸ್‌ಪಿಪಿ ಪರಿಶೀಲನೆ ನಡೆಸುತ್ತಿದ್ದು, ಈ ಕಾರ್ಯ ಪೂರ್ಣಗೊಂಡ ಕೂಡಲೇ ತನಿಖಾಧಿಕಾರಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...