alex Certify ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ, ಮೋಡ ಬಿತ್ತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ, ಮೋಡ ಬಿತ್ತನೆ

ಮಂಡ್ಯ: ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ ಮತ್ತು ಮೋಡ ಬಿತ್ತನೆ ಕುರಿತಾಗಿ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ಅಂತ್ಯದೊಳಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದ್ದು, ಒಂದು ವೇಳೆ ಮಳೆ ಆಗದಿದ್ದರೆ ಮೋಡ ಬಿತ್ತನೆ, ಬರಗಾಲ ಘೋಷಣೆ ಅನಿವಾರ್ಯ ಎಂದು ತಿಳಿಸಿದ್ದಾರೆ.

ಕ್ಯಾಬಿನೆಟ್ ಉಪ ಸಮಿತಿ ಈಗಾಗಲೇ ಒಂದು ಸಭೆ ಮಾಡಿದ್ದು, ಕೆಲ ಮಾನದಂಡಗಳ ನಿಗದಿ ನಂತರ ಬರಗಾಲ ಘೋಷಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಕೆ.ಆರ್.ಎಸ್. ಒಳಹರಿವು ಕಡಿಮೆಯಾಗಿದ್ದು, ನಮಗೇ ನೀರಿನ ಕೊರತೆ ಇರುವಾಗ ತಮಿಳುನಾಡಿಗೆ ನೀರು ಕೊಡಲು ಹೇಗೆ ಸಾಧ್ಯ? ಮಳೆಯಾಗದಿದ್ದರೆ ಕುಡಿಯುವ ನೀರಿಗೂ ತೊಂದರೆ ಆಗುತ್ತದೆ. ತಮಿಳುನಾಡಿಗೆ ನೀರು ಬಿಡಲಾಗದ ಪರಿಸ್ಥಿತಿ ಇದೆ. ಮುಖ್ಯಮಂತ್ರಿಗಳು ಮತ್ತು ನೀರಾವರಿ ಸಚಿವರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...