alex Certify ಹೃದಯ ವಿದ್ರಾವಕ ಘಟನೆ: ಐವರ ಮೇಲೆ ಮಾನಸಿಕ ಅಸ್ವಸ್ಥನಿಂದ ಹಲ್ಲೆ; ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯ ವಿದ್ರಾವಕ ಘಟನೆ: ಐವರ ಮೇಲೆ ಮಾನಸಿಕ ಅಸ್ವಸ್ಥನಿಂದ ಹಲ್ಲೆ; ಮೂವರ ಸಾವು

ಮುಂಬೈನಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮುಂಬೈನ ಗ್ರಾಂಟ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಐವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ಪೈಕಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ

ಹಿರಿಯ ನಾಗರಿಕ ದಂಪತಿಗಳು ಸೇರಿದಂತೆ ಮೂವರನ್ನು ಕೊಂದ ಆರೋಪದ ಮೇಲೆ 54 ವರ್ಷದ ವ್ಯಕ್ತಿಯನ್ನು ದಕ್ಷಿಣ ಮುಂಬೈನ ಡಿಬಿ ಮಾರ್ಗ್ ಪೊಲೀಸರು ಬಂಧಿಸಿದ್ದಾರೆ.

ಮಾನಸಿಕವಾಗಿ ಅಸ್ವಸ್ಥನಾಗಿರುವ ಚೇತನ್ ಗಾಲಾ ಶುಕ್ರವಾರ ಮಧ್ಯಾಹ್ನ ತನ್ನ ಐವರು ನೆರೆಹೊರೆಯವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಪೊಲೀಸರ ಪ್ರಕಾರ ಪಾರ್ವತಿ ಮ್ಯಾನ್ಷನ್ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...