alex Certify BIG NEWS: ನಕ್ಸಲರ ಭೀಕರ ದಾಳಿ; 11 ಯೋಧರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕ್ಸಲರ ಭೀಕರ ದಾಳಿ; 11 ಯೋಧರು ಹುತಾತ್ಮ

ದಾಂತೇವಾಡ: ಛತ್ತಿಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಸ್ಫೋಟದಲ್ಲಿ 11 ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ.

ಛತ್ತೀಸ್ ಗಢದ ದಾಂತೆವಾಡ ಜಿಲ್ಲೆಯ ಅರನಪುರದಲ್ಲಿ ಈ ಘಟನೆ ನಡೆದಿದೆ. ಡಿ ಆರ್ ಜಿ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಡಿ ಆರ್ ಜಿ ಸಿಬ್ಬಂದಿ ವಾಹನ ಚಾಲಕ ಸೇರಿ 10 ಯೋಧರು ಹುತಾತ್ಮರಾಗಿದ್ದಾರೆ. ನಕ್ಸಲರ ವಿರುದ್ಧ ಡಿ ಆರ್ ಜಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ನಕ್ಸಲರು ಯೋಧರ ವಾಹನವನ್ನೇ ಸ್ಫೋಟಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...