alex Certify ನಕ್ಸಲರೊಂದಿಗೆ ಕಾಳಗ, ಡೆಡ್ಲಿ ಎನ್ ಕೌಂಟರ್ ನಂತ್ರ 21 ಸೈನಿಕರು ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕ್ಸಲರೊಂದಿಗೆ ಕಾಳಗ, ಡೆಡ್ಲಿ ಎನ್ ಕೌಂಟರ್ ನಂತ್ರ 21 ಸೈನಿಕರು ನಾಪತ್ತೆ

ಛತ್ತೀಸ್ಗಡದ ಸುಕ್ಮಾ -ಬಿಜಾಪುರ ಗಡಿಪ್ರದೇಶದಲ್ಲಿ ನಕ್ಸಲರೊಂದಿಗೆ ನಡೆದ ಕಾಳಗದ ನಂತರ 21 ಸೈನಿಕರು ನಾಪತ್ತೆಯಾಗಿದ್ದಾರೆ. ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತಾರೆಮ್ ಪ್ರದೇಶದಲ್ಲಿ ಮುಖಾಮುಖಿಯಾಗಿ ಈ ಸಂದರ್ಭದಲ್ಲಿ ಎನ್ಕೌಂಟರ್ನಲ್ಲಿ ಐವರು ನಕ್ಸಲರನ್ನು ಸದೆಬಡಿಯಲಾಗಿದೆ.

ಕಾರ್ಯಾಚರಣೆ ವೇಳೆ 5 ಮಂದಿ ಸೈನಿಕರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಬಿಜಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಪುರ ಆಸ್ಪತ್ರೆಗೆ 7 ಜನರನ್ನು ಕಳುಹಿಸಲಾಗಿದೆ.

ಸಿಆರ್ಪಿಎಫ್ ಮಹಾನಿರ್ದೇಶಕ ಕುಲದೀಪ್ ಸಿಂಗ್ ಛತ್ತಿಸ್ಗಢಕ್ಕೆ ತಲುಪಿದ್ದು, ಘಟನೆಯ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳ ಚೇತರಿಕೆ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...