alex Certify ಜನ್ಮಾಷ್ಟಮಿಗೆ ಉಪವಾಸ ವೃತ ಕೈಗೊಂಡಿದ್ದ ವಿದ್ಯಾರ್ಥಿಗಳಿಗೆ ಮನಬಂದಂತೆ ಥಳಿಸಿದ ಶಿಕ್ಷಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ್ಮಾಷ್ಟಮಿಗೆ ಉಪವಾಸ ವೃತ ಕೈಗೊಂಡಿದ್ದ ವಿದ್ಯಾರ್ಥಿಗಳಿಗೆ ಮನಬಂದಂತೆ ಥಳಿಸಿದ ಶಿಕ್ಷಕ…!

ಜನ್ಮಾಷ್ಟಮಿ ಪ್ರಯುಕ್ತ ಬೆಳಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಉಪವಾಸ ವೃತ ಕೈಗೊಂಡಿದ್ದ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಯ ಶಿಕ್ಷಕ ಥಳಿಸಿದ ಅಮಾನವೀಯ ಘಟನೆ ಛತ್ತೀಸಗಢದ ಕಂಡಗಾಂವ್​ ಜಿಲ್ಲೆಯಲ್ಲಿ ವರದಿಯಾಗಿದೆ.

ಚರಣ್​ ಮಾರ್ಕಂ ಎಂಬ ಶಿಕ್ಷಕನು ವಿದ್ಯಾರ್ಥಿಗಳಿಗೆ ಥಳಿಸಿದ್ದು ಮಾತ್ರವಲ್ಲ ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಗಿರೋಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಂಡಾಪಾರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.

ಶಿಕ್ಷಕನ ವಿರುದ್ಧ ವಿಚಾರಣೆ ಮುಂದುವರಿದಿದೆ ಎಂದು ಕೊಂಡಗಾಂವ್​​ನ ಕಲೆಕ್ಟರ್​ ಪುಷ್ಪೇಂದ್ರ ಕುಮಾರ್​ ಮೀನಾ ಹೇಳಿದ್ರು.

7 ಹಾಗೂ 8ನೇ ತರಗತಿ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರು ಶಿಕ್ಷಕನ ವಿರುದ್ಧ ದೂರನ್ನು ನೀಡಿದ್ದರು. ವಿದ್ಯಾರ್ಥಿಗಳಿಗೆ ಥಳಿಸಿದ್ದು ಮಾತ್ರವಲ್ಲದೇ ಶ್ರೀಕೃಷ್ಣನ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಶಿಕ್ಷಕ ಚರಣ್​ ವಿರುದ್ಧ ಗ್ರಾಮಸ್ಥರು ಆಡಿಯೋ ಹಾಗೂ ವಿಡಿಯೋ ಸಾಕ್ಷ್ಯಗಳನ್ನು ಒದಗಿಸಿದ್ದಾರೆ ಎಂದು ಮೀನಾ ಹೇಳಿದ್ದಾರೆ.
ಗ್ರಾಮಸ್ಥರು ನೀಡಿರುವ ದೂರನ್ನು ಆಧರಿಸಿ ಶಿಕ್ಷಕನ ವಿರುದ್ಧ ಶಿಕ್ಷಣ ಇಲಾಖೆ ತನಿಖೆ ಕೈಗೊಂಡಿದೆ ಮಾತ್ರವಲ್ಲದೇ ಶಿಕ್ಷಕನನ್ನು ಅಮಾನತು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...