alex Certify ಹಬ್ಬದ ದಿನವೇ ಬೆಚ್ಚಿ ಬೀಳಿಸುವ ಘಟನೆ: ಮನೆಗೆ ನುಗ್ಗಿ ಮಹಿಳೆ ಕತ್ತು ಕೊಯ್ದು ಬರ್ಬರ ಹತ್ಯೆ, ಮಗನಿಂದಲೇ ಕೊಲೆಗೆ ಸುಪಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ದಿನವೇ ಬೆಚ್ಚಿ ಬೀಳಿಸುವ ಘಟನೆ: ಮನೆಗೆ ನುಗ್ಗಿ ಮಹಿಳೆ ಕತ್ತು ಕೊಯ್ದು ಬರ್ಬರ ಹತ್ಯೆ, ಮಗನಿಂದಲೇ ಕೊಲೆಗೆ ಸುಪಾರಿ

ಚಿಕ್ಕಬಳ್ಳಾಪುರ: ಇಬ್ಬರು ಸುಪಾರಿ ಕಿಲ್ಲರ್ ಗಳಿಂದ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ನಿನ್ನೆ ರಾತ್ರಿ 55 ವರ್ಷದ ನಳಿನಿ ಅವರನ್ನು ಹತ್ಯೆ ಮಾಡಲಾಗಿದೆ.

ಮನೆಗೆ ನುಗ್ಗಿ ಕತ್ತು ಕೊಯ್ದು ಮಹಿಳೆಯನ್ನು ಹತ್ಯೆ ಮಾಡಲಾಗಿದ್ದು, ಪರಾರಿಯಾಗುತ್ತಿದ್ದ ಆರೋಪಿಗಳು ಸಾರ್ವಜನಿಕರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.

ಆಸ್ತಿ ವಿವಾದಕ್ಕೆ ಮಗನೇ ಸುಪಾರಿ ನೀಡಿ ತಾಯಿಯನ್ನು ಕೊಲೆ ಮಾಡಿಸಿದ್ದಾನೆ. ತಾಯಿ ಕೊಲೆಗೆ ಪುತ್ರ 5 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದಾನೆ ಎಂದು ಪೊಲೀಸರ ಮುಂದೆ ಆರೋಪಿಗಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಆಂಧ್ರಪ್ರದೇಶದ ವಿಜಯವಾಡದ ಮುಕೇಶ್ ಹಾಗೂ ಹರಿ ಅವರನ್ನು ಬಂಧಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...