alex Certify BIG NEWS: ವಕೀಲನ ಮೇಲೆ ಹಲ್ಲೆ; ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧವೇ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕೀಲನ ಮೇಲೆ ಹಲ್ಲೆ; ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧವೇ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂಧಿಗಳು ಹಲ್ಲೆ ನಡೆಸಿದ್ದ ಪ್ರಕರರಣ ಸಂಬಂಧ ಈಗಾಗಲೇ 6 ಪೊಲೀಸ್ ಸಿಬ್ಬಂದಿ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ.

ವಕೀಲನ ಮೇಲಿನ ಹಲ್ಲೆ ಖಂಡಿಸಿ ವಕೀಲರು ಚಿಕ್ಕಮಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದು, ಠಾಣೆಯಲ್ಲಿ ಪ್ರತಿಭಟನೆ ನಡೆಸಿರುವ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.

ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವೇಳೆ ವಕೀಲರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ಚಿಕ್ಕಮಗಳೂರಿನ ಹನುಮಂತಪ್ಪ ಸರ್ಕಲ್ ನಲ್ಲಿ ಪೊಲೀಸರು ಹಾಗೂ ಕುಟುಂಬದವರು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆಗ್ರಹಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್ 503, 406, 353, 149 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...