alex Certify ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಹಜರು ಮುಗಿಸಿ ನಟ ಚಿಕ್ಕಣ್ಣ ವಿಚಾರಣೆಗೆ ಕರೆತಂದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಹಜರು ಮುಗಿಸಿ ನಟ ಚಿಕ್ಕಣ್ಣ ವಿಚಾರಣೆಗೆ ಕರೆತಂದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ನಟ ಚಿಕ್ಕಣ್ಣ ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ಕೊಲೆ ನಡೆದ ದಿನ ನಟ ದರ್ಶನ್ ಅವರೊಂದಿಗೆ ಚಿಕ್ಕಣ್ಣ ಕೂಡ ಇದ್ದರು. ಸ್ಟೋನಿ ಬ್ರೂಕ್ಸ್ ಹೋಟೆಲ್ ನಲ್ಲಿ ದರ್ಶನ್ ಅವರೊಂದಿಗೆ ಪಾರ್ಟಿ ಮಾಡಿದ್ದ ಚಿಕ್ಕಣ್ಣ ಅವರನ್ನು ಪೊಲೀಸರು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ.

ಇಂದು ರೆಸ್ಟೊರೆಂಟ್ ನಲ್ಲಿ ಮಹಜರು ಮುಗಿಸಿದ ಪೊಲೀಸರು ನಟ ಚಿಕ್ಕಣ್ಣ ಅವರನ್ನು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಠಾಣೆಯಲ್ಲಿ ಚಿಕ್ಕಣ್ಣ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು. ಪಾರ್ಟಿಯಲ್ಲಿ ಭಾಗಿಯಾಗಿದ್ದಕ್ಕೆ ಸಾಕ್ಷಿಯಾಗಿ ಪರಿಗಣಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...