alex Certify ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು

ಬಳ್ಳಾರಿ: ಸಾಂಬಾರು ಪಾತ್ರೆಗೆ ಬಿದ್ದು ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಹೆಚ್‍ಕೆ ಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ ಮತ್ತು ಹುಲಿಗೆಮ್ಮ ದಂಪತಿಯ ಎರಡು ವರ್ಷದ ಪುತ್ರ ಸಮರ್ಥ ಮೃತಪಟ್ಟ ಮಗು. ಮನೆಯ ಕಾರ್ಯಕ್ರಮಕ್ಕಾಗಿ ಅಡುಗೆ ಸಿದ್ದಪಡಿಸಿ ಇಡಲಾಗಿದೆ. ಸಾಂಬಾರು ಪಾತ್ರೆ ಪಕ್ಕದಲ್ಲಿ ಇಟ್ಟಿದ್ದ ಹಪ್ಪಳ ತೆಗೆದುಕೊಳ್ಳಲು ಹೋದ ಮಗು ಆಕಸ್ಮಿಕವಾಗಿ ಸಾಂಬಾರು ಪಾತ್ರೆಗೆ ಬಿದ್ದಿದೆ. ತೀವ್ರ ಸುಟ್ಟ ಗಾಯಗಳಾಗಿದ್ದ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...