alex Certify ಅಪ್ರಾಪ್ತೆ ಮದುವೆಯಾದ ಯುವಕನಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮದುವೆಯಾದ ಯುವಕನಿಂದ ಘೋರ ಕೃತ್ಯ

ಮೈಸೂರು: ಬಾಲ್ಯವಿವಾಹ ವಿರೋಧಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಚಾಕುವಿನಿಂದ ಇರಿದ ಘಟನೆ ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್ ಚಾಕು ಇರಿತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಗ್ರಾಮದ ಮಾದೇಶ್ ಎಂಬ ಯುವಕ ನಾಗೇಶ್ ಗೆ ಚಾಕುವಿನಿಂದ ಇರಿದಿದ್ದಾನೆ. ಒಂದು ತಿಂಗಳ ಹಿಂದೆ ನಾಗೇಶ್ ಚಿಕ್ಕಪ್ಪನ ಮಗಳನ್ನು ಮಾದೇಶ್ ಗೌಪ್ಯವಾಗಿ ಮದುವೆಯಾಗಿದ್ದು, ಅಪ್ರಾಪ್ತೆಯಾಗಿದ್ದ ಬಾಲಕಿಯನ್ನು ಮದುವೆಯಾಗಿರುವುದು ತಪ್ಪು ಎಂದು ನಾಗೇಶ್ ಬುದ್ಧಿವಾದ ಹೇಳಿದ್ದರೆನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಮಾದೇಶ್ ಗಲಾಟೆ ನಡೆಸಿದ್ದು, ಗಲಾಟೆ ವೇಳೆ ನಾಗೇಶ್ ಗೆ ಚಾಕುವಿನಿಂದ ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...