alex Certify Amarnath Yatra: ಶಿಥಿಲಗೊಂಡಿದ್ದ ಸೇತುವೆಯನ್ನು ದಾಖಲೆ ಅವಧಿಯಲ್ಲಿ ಮರು ನಿರ್ಮಿಸಿದ ಭಾರತೀಯ ಯೋಧರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Amarnath Yatra: ಶಿಥಿಲಗೊಂಡಿದ್ದ ಸೇತುವೆಯನ್ನು ದಾಖಲೆ ಅವಧಿಯಲ್ಲಿ ಮರು ನಿರ್ಮಿಸಿದ ಭಾರತೀಯ ಯೋಧರು

ಅಮರನಾಥ ಯಾತ್ರೆಗೆ ಸಾಗುವ ಮಾರ್ಗದಲ್ಲಿ ಪ್ರತಿಕೂಲ ಹವಾಮಾನದ ಕಾರಣಕ್ಕೆ ಶಿಥಿಲಗೊಂಡಿದ್ದ ಸೇತುವೆಯೊಂದನ್ನು ಭಾರತೀಯ ಯೋಧರ ಚಿನಾರ್ ಕಾರ್ಪ್ಸ್ ತಂಡವು ದಾಖಲೆ ಅವಧಿಯಲ್ಲಿ ನಿರ್ಮಿಸಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದಿಢೀರ್ ಭೂ ಕುಸಿತದ ಕಾರಣಕ್ಕೆ ಈ ಸೇತುವೆಗಳು ಕೊಚ್ಚಿ ಹೋಗಿದ್ದು, ಇದರಿಂದಾಗಿ ಜೂನ್ 30 ರಿಂದ ಆರಂಭವಾಗಿರುವ ಅಮರನಾಥ ಯಾತ್ರಿಗಳು ಬಳಸಿಕೊಂಡು ಸಾಗಬೇಕಾಗಿತ್ತು. ಹೀಗಾಗಿ ಹೆಚ್ಚುವರಿ ನಾಲ್ಕು ಗಂಟೆಗಳ ಸಮಯ ತಗುಲುತ್ತಿತ್ತು.

ಜಿಲ್ಲಾಡಳಿತ ಸಹಕಾರದೊಂದಿಗೆ ಚಿನಾರ್ ಕಾರ್ಪ್ಸ್ ಸೈನಿಕರು ಈ ಸೇತುವೆ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇದಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಹೆಲಿಕಾಪ್ಟರ್ ಮೂಲಕವೂ ತರಿಸಿಕೊಳ್ಳಲಾಗಿತ್ತು. ಭಾರತೀಯ ಯೋಧರು ಪ್ರತಿಕೂಲ ಹವಾಮಾನದ ಮಧ್ಯೆಯೂ ನಿರಂತರವಾಗಿ ಕಾರ್ಯ ನಿರ್ವಹಿಸಿ ಈ ಸೇತುವೆ ರೂಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...