alex Certify BIG NEWS: ಉಪವಾಸ ಸತ್ಯಾಗ್ರಹ; ಮೂವರು ಸಾರಿಗೆ ನೌಕರರು ಅಸ್ವಸ್ಥ; ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪವಾಸ ಸತ್ಯಾಗ್ರಹ; ಮೂವರು ಸಾರಿಗೆ ನೌಕರರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೂವರು ಸಾರಿಗೆ ನೌಕರರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಸಾರಿಗೆ ನೌಕರರ ಸಭೆ ವಿಫಲಗೊಂಡ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹ ಮುಂದುವರೆದಿದ್ದು, ಕಳೆದ 5 ದಿನಗಳಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಧರಣಿ ನಿರತರಲ್ಲಿ ಮೂವರು ನೌಕರರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಜಾಗೊಂಡಿರುವ ನೌಕರರನ್ನು ವಾಪಸ್ ಸೇರಿಸಿಕೊಳ್ಳಬೇಕು, 7ನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...