alex Certify BREAKING : ಮುಡಾ ಕೇಸ್’ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಕೋರ್ಟ್’ಗೆ 11,200 ಪುಟಗಳ ತನಿಖಾ ವರದಿ ಸಲ್ಲಿಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಡಾ ಕೇಸ್’ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಕೋರ್ಟ್’ಗೆ 11,200 ಪುಟಗಳ ತನಿಖಾ ವರದಿ ಸಲ್ಲಿಕೆ.!

ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದ್ದು, ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ 11,200 ಪುಟಗಳ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ.

50 ಜನರ ಹೇಳಿಕೆಗಳನ್ನು ದಾಖಲಿಸಿದ ಪೊಲೀಸರು 21 ಸಂಪುಟ, 11200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದು ಉಲ್ಲೇಖಿಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ.24 ಕ್ಕೆ ಮುಂದೂಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿತ್ತು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಜಮೀನು ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಸಾಕ್ಷಾಧಾರ ಕೊರತೆಯಿದೆ. ನಾಲ್ವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ತಿಳಿಸಿತ್ತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...