alex Certify BIG NEWS : ಆಗಸ್ಟ್ ನಿಂದ ರಾಜ್ಯಾದ್ಯಂತ ‘ಸರ್ಕಾರಿ ಆಸ್ತಿ’ಗಳ ಒತ್ತುವರಿ ತೆರವು ಕಾರ್ಯ ಆರಂಭ : ಸಚಿವ ಕೃಷ್ಣಭೈರೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಆಗಸ್ಟ್ ನಿಂದ ರಾಜ್ಯಾದ್ಯಂತ ‘ಸರ್ಕಾರಿ ಆಸ್ತಿ’ಗಳ ಒತ್ತುವರಿ ತೆರವು ಕಾರ್ಯ ಆರಂಭ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು :    ಆಗಸ್ಟ್ ನಿಂದ  ರಾಜ್ಯಾದ್ಯಂತ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಆರಂಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು 14 ಲಕ್ಷ ಸರ್ಕಾರಿ ಆಸ್ತಿಗಳಿವೆ. ಆಗಸ್ಟ್ನಿಂದ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಆರಂಭಿಸಲಾಗುವುದು ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಆಸ್ತಿ ಸಂರಕ್ಷಣೆಗೆ ‘ಲ್ಯಾಂಡ್ ಬೀಟ್’ ವ್ಯವಸ್ಥೆ ಜಾರಿಗೆ

“ಸರ್ಕಾರಿ ಆಸ್ತಿ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರಿ ಆಸ್ತಿ ಇರುವ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಮಾಡಲು ʼಲ್ಯಾಂಡ್ ಬೀಟ್ʼ ಕಾರ್ಯಕ್ರಮ ಜಾರಿಗೆ ತರಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇತ್ತೀಚೆಗೆ ತಿಳಿಸಿದ್ದರು.

ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ಬರಲಿದೆ. ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ ತಂತ್ರಾಂಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋಫೆನ್ಸಿಂಗ್ ಮಾಡುತ್ತಾರೆ. ಈ ಆಪ್ ಮೂಲಕ ಜಿಯೋ ಫೆನ್ಸಿಂಗ್ ಮಾಡಿ, ಒತ್ತುವರಿ ಮಾಡಿದ್ದಲ್ಲಿ ಅಂತಹ ಆಸ್ತಿಗಳ ವಿವರ ಲಬ್ಯವಾಗುತ್ತದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...