alex Certify ಭರ್ತಿಯಾದ ಕೆ.ಆರ್.ಎಸ್., ಕಬಿನಿಗೆ ಇಂದು ಸಿಎಂ ಬೊಮ್ಮಾಯಿ ಬಾಗಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ತಿಯಾದ ಕೆ.ಆರ್.ಎಸ್., ಕಬಿನಿಗೆ ಇಂದು ಸಿಎಂ ಬೊಮ್ಮಾಯಿ ಬಾಗಿನ

ಬೆಂಗಳೂರು: ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಮತ್ತು ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಾಗಿನ ಅರ್ಪಿಸಲಿದ್ದಾರೆ.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು ಬೆಳಿಗ್ಗೆ 9.45ಕ್ಕೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹೆಚ್‍ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಲಿದ್ದಾರೆ.

ನಂತರ ಮಧ್ಯಾಹ್ನ 12.30 ಕ್ಕೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಹಾಗೂ ಕೆ.ಆರ್.ಎಸ್.ಗೆ ಬಾಗಿನ ಅರ್ಪಿಸಲಿದ್ದಾರೆ. ಸಚಿವರು, ಶಾಸಕರು, ಅಧಿಕಾರಿಗಳು ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...