alex Certify BREAKING: ಸಿಎಂಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ: ಎಲ್ಲರ ಹಾರೈಕೆಯಿಂದ ಮತ್ತಷ್ಟು ಸ್ಪೂರ್ತಿ ಎಂದ್ರು ಬಸವರಾಜ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಎಂಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ: ಎಲ್ಲರ ಹಾರೈಕೆಯಿಂದ ಮತ್ತಷ್ಟು ಸ್ಪೂರ್ತಿ ಎಂದ್ರು ಬಸವರಾಜ ಬೊಮ್ಮಾಯಿ

ಬೆಂಗಳೂರು: ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಆದರೆ, ಜನಸಾಮಾನ್ಯರು, ಶಾಸಕರು, ಸಂಪುಟ ಸಹೋದ್ಯೋಗಿಗಳು ಸೇರಿದಂತೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಕ್ಷೇತ್ರದ ಜನತೆ ಶುಭಾಶಯ ಕೋರುತ್ತಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಶುಭಾಶಯ ಹೇಳಿದ್ದಾರೆ. ಅಮಿತ್ ಶಾ ಅವರು ಫೋನ್ ಮಾಡಿ ಮಾತನಾಡಿದ್ದಾರೆ. ನಿಮ್ಮೆಲ್ಲರ ಶುಭ ಹಾರೈಕೆ ರಾಜ್ಯವನ್ನು ಸುಭಿಕ್ಷವಾಗಿಡಲು, ಸಮಗ್ರ ಅಭಿವೃದ್ಧಿಪಡಿಸಲು ಸ್ಪೂರ್ತಿ ನೀಡಿದೆ. ಬಡವರು, ರೈತರು, ಮಹಿಳೆಯರು, ಯುವಕರು ಸೇರಿದಂತೆ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೇನೆ. ಅವರ ಹಾರೈಕೆ ಪ್ರೇರಣೆ ನೀಡಿದೆ ಎಂದರು.

ಇನ್ನಷ್ಟು ಗಟ್ಟಿಯಾಗಿ, ಇನ್ನಷ್ಟು ಸ್ಪೂರ್ತಿಯಿಂದ ರಾಜ್ಯವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗುವ ಸಂಕಲ್ಪ ಮಾಡುತ್ತೇನೆ. ಇವತ್ತು ಸರ್ಕಾರಕ್ಕೆ ಆರು ತಿಂಗಳು ಪೂರೈಸಿದೆ. ಕೊರೋನಾ ಮಾರ್ಗಸೂಚಿ ಪಾಲಿಸುವುದರೊಂದಿಗೆ ಕಳೆದ ಆರು ತಿಂಗಳ ಅವಧಿಯ ರಾಜ್ಯದ ಅಭಿವೃದ್ಧಿ, ಸಾಧನೆ ಬಗ್ಗೆ ಕಿರುಹೊತ್ತಿಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...