alex Certify ಗ್ರಾಪಂ ಸದಸ್ಯರಿಗೂ ಪಿಂಚಣಿ ಸೌಲಭ್ಯ: ಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಪಂ ಸದಸ್ಯರಿಗೂ ಪಿಂಚಣಿ ಸೌಲಭ್ಯ: ಸಿಎಂ ಮಾಹಿತಿ

ಬೆಳಗಾವಿ: ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯಿತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಕ್ರಮವಾಗಿ 6000 ರೂ., 4000 ರೂ. ಹಾಗೂ 2,000 ರೂ. ಗೌರವ ಧನ ಪರಿಷ್ಕರಿಸಿ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಇದರೊಂದಿಗೆ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಪ್ರಯಾಣ ಭತ್ಯೆ ಮತ್ತು ದಿನ ಭತ್ಯೆ ನೀಡಲಾಗುವುದು. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಣೆಯಾದಲ್ಲಿ ಗೌರವಧನ ಮತ್ತಷ್ಟು ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...