alex Certify ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಬಿಜೆಪಿ ಅಧ್ಯಕ್ಷ ಕಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಬಿಜೆಪಿ ಅಧ್ಯಕ್ಷ ಕಟೀಲ್

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮಾಲೋಚನೆ ನಡೆಸಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ಬಿಜೆಪಿ ಪದಾಧಿಕಾರಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಸಭೆಗೂ ಮೊದಲು ಕಟೀಲು ಸಿಎಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಬಿಬಿಎಂಪಿ ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಪೂರ್ವ ಸಿದ್ಧತಾ ಸಭೆ ಕೈಗೊಂಡಿದ್ದು, ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಮಂಡಲಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಪಕ್ಷ ಸಂಘಟನೆ ಮತ್ತು ಬಿಬಿಎಂಪಿ ಚುನಾವಣೆ ಕುರಿತಾಗಿ ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸಿಎಂ ಅವರೊಂದಿಗೆ ಕಟೀಲ್ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ನಿನ್ನೆಯಷ್ಟೇ ಉಸ್ತುವಾರಿ ಸಚಿವ ನೇಮಕ ಮಾಡಲಾಗಿದ್ದು, ಇದರೊಂದಿಗೆ ಸಚಿವ ಸಂಪುಟ ಪುನಾರಚನೆ ಬಗ್ಗೆಯೂ ಉಭಯ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...