alex Certify BIG NEWS: ಅಧಿಕಾರ ಕಳೆದುಕೊಳ್ಳುವ ಮೌಢ್ಯ ಮುರಿದು ಚಾಮರಾಜನಗರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿಕಾರ ಕಳೆದುಕೊಳ್ಳುವ ಮೌಢ್ಯ ಮುರಿದು ಚಾಮರಾಜನಗರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ತಾರೆ ಎಂಬ ಮೂಢನಂಬಿಕೆ ಬೆಳೆದುಬಂದಿದೆ. ಈ ಕಾರಣಕ್ಕೆ ಚಾಮರಾಜನಗರಕ್ಕೆ ಅನೇಕ ಮುಖ್ಯಮಂತ್ರಿಗಳು ಭೇಟಿ ನೀಡಿಲ್ಲ. ಭೇಟಿ ನೀಡಿದ್ದವರು ಅಧಿಕಾರ ಕಳೆದುಕೊಂಡಿದ್ದಾರೆ. ಭೇಟಿ ನೀಡದಿದ್ದವರೂ ಅಧಿಕಾರ ಕಳೆದುಕೊಂಡಿದ್ದಾರೆ.

ಈ ಮೌಢ್ಯ ಮುರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜನಗರಕ್ಕೆ ಇಂದು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಗಳೊಂದಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ನಾನು ಚಾಮರಾಜನಗರಕ್ಕೆ ಭೇಟಿ ಕೊಡುತ್ತೇನೆ. ಒಂದು ಸಲ ಮಾತ್ರವಲ್ಲ, ಇನ್ನೂ ಹಲವು ಬಾರಿ ನಾನು ಅಲ್ಲಿಗೆ ಭೇಟಿ ನೀಡುತ್ತೇನೆ. ಮುಖ್ಯಮಂತ್ರಿಗೆ ಎಲ್ಲ ಜಿಲ್ಲೆಗಳು ಒಂದೇ. ಅಲ್ಲಿಗೆ ಹೋಗದಿದ್ದರೆ ಅಧಿಕಾರ ಉಳಿದಿದೆಯಾ? ನನಗೆ ಬೇರೆಯವರ ರೀತಿ ಯಾವುದೇ ಭಯವಿಲ್ಲ, ಇದು ನಂಬಿಕೆ, ಅಪನಂಬಿಕೆ ಪ್ರಶ್ನೆ ಅಲ್ಲ. ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯದ ಪ್ರಶ್ನೆ. ಆ ಕರ್ತವ್ಯವನ್ನು ನಾನು ಈಗ ಮಾಡುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...