alex Certify ಕಾಂಗ್ರೆಸ್​ ಅಲ್ಪಸಂಖ್ಯಾತರ ರಕ್ಷಣೆ ಮಾಡಿಲ್ಲ, ಅಲ್ಪಸಂಖ್ಯಾತರು ಕಾಂಗ್ರೆಸ್​ ರಕ್ಷಿಸಿದ್ದಾರೆ ; ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್​ ಅಲ್ಪಸಂಖ್ಯಾತರ ರಕ್ಷಣೆ ಮಾಡಿಲ್ಲ, ಅಲ್ಪಸಂಖ್ಯಾತರು ಕಾಂಗ್ರೆಸ್​ ರಕ್ಷಿಸಿದ್ದಾರೆ ; ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್

ಉಪಚುನಾವಣೆ ಸಮರ ಗೆಲ್ಲಲು ಟೊಂಕ ಕಟ್ಟಿ ನಿಂತಿರುವ ಸಿಎಂ ಬಸವರಾಜ ಬೊಮ್ಮಾಯಿ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇಂದು ಹಾವೇರಿಯ ಚಿಕೌಂಶಿ ಹೊಸೂರು ಗ್ರಾಮದಲ್ಲಿ ಅಬ್ಬರದ ಪ್ರಚಾರ ಕಾರ್ಯ ನಡೆಸಿದ ಬೊಮ್ಮಾಯಿ ಕಾಂಗ್ರೆಸ್​ ವಿರುದ್ಧ ಆರೋಪಗಳ ಸುರಿಮಳೆಯನ್ನೇಗೈದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇನೆ ಎಂದು ಹೇಳಿಕೊಳ್ತಿದೆ. ಆದರೆ ನಿಜಾಂಶ ಏನೆಂದರೆ ಅಲ್ಪಸಂಖ್ಯಾತರಿಂದಲೇ ಕಾಂಗ್ರೆಸ್​ ರಕ್ಷಣೆ ಆಗ್ತಿದೆ. ಐದು ವರ್ಷಗಳ ಕಾಲ ಅಲ್ಪಸಂಖ್ಯಾತರನ್ನು ಬಾವಿಯಲ್ಲಿ ಇಡುತ್ತಾರೆ. ಚುನಾವಣೆ ಟೈಂನಲ್ಲಿ ಅಲ್ಪಸಂಖ್ಯಾತರಿಗೆ ಹಗ್ಗ ಕೊಟ್ಟು ಮೇಲೆತ್ತುತ್ತಾರೆ. ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಂದ ಮತ ಹಾಕಿಸಿಕೊಂಡ ಬಳಿಕ ಮತ್ತೆ ಅವರನ್ನು ಬಾವಿಗೆ ತಳ್ಳುತ್ತಾರೆ.

ಅಲ್ಪಸಂಖ್ಯಾತರ ವಿಚಾರದಲ್ಲಿ ಕಾಂಗ್ರೆಸ್​ ಗುತ್ತಿಗೆ ರಾಜಕಾರಣ ಮಾಡುತ್ತಿದೆ. ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿಕೊಂಡು ತಿರುಗುತ್ತೆ, ಆದರೆ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಈ ಕಾಂಗ್ರೆಸ್​. ನೀವು ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿಲ್ಲ. ಅಲ್ಪಸಂಖ್ಯಾತರೇ ಕಾಂಗ್ರೆಸ್​ ರಕ್ಷಣೆ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರು ಕಾಂಗ್ರೆಸ್​ನ್ನು ಬಿಟ್ಟುಕೊಟ್ಟ ದಿನ ನಿಮ್ಮ ಪಕ್ಷ ಅಡ್ರೆಸ್​ಗೇ ಇರಲ್ಲ.
ಕಾಂಗ್ರೆಸ್​ನ್ನು ಮುಳುಗುವ ಹಡಗು ಎಂದು ಕರೆಯುತ್ತಾರೆ. ಆದರೆ ಕಾಂಗ್ರೆಸ್​ ಈಗಾಗಲೇ ಮುಳುಗಿ ಹೋಗಿದೆ. ಬೇಕಿದ್ದರೆ ಭೂಪಟ ನೋಡಿ, ಕರ್ನಾಟಕದಲ್ಲಿ ಒಂಚೂರು ಕಾಂಗ್ರೆಸ್​ ಅಲುಗಾಡ್ತಿದೆ. 30ನೇ ತಾರೀಖು ನೀವು ಬಿಜೆಪಿಗೆ ಮತ ಹಾಕಿ.​ ಅಲುಗಾಡುತ್ತಿರುವ ಕಾಂಗ್ರೆಸ್​ ಮುಳಗೇ ಹೋಗುತ್ತೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...