alex Certify BIG NEWS: ಜೆಡಿಎಸ್ ಮುಗಿಸಲು ಸಿಎಂ ಡಿಸಿಎಂ ಸಂಚು; ಜಿ.ಟಿ. ದೇವೇಗೌಡ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ಮುಗಿಸಲು ಸಿಎಂ ಡಿಸಿಎಂ ಸಂಚು; ಜಿ.ಟಿ. ದೇವೇಗೌಡ ಗಂಭೀರ ಆರೋಪ

ಜೆಡಿಎಸ್‌ ರಾಜ್ಯದೆಲ್ಲೆಡೆ ಬಲಿಷ್ಠ, ಮೋದಿ ಪಿಎಂ, ಎಚ್‌ಡಿಕೆ ಸಿಎಂ ಮಾಡಿ: ಜಿ.ಟಿ.ದೇವೇಗೌಡ ಮನವಿ - jds is strong in statewide, make modi pm, hdk cm: gt deve gowda appeals in hubballi - Vijay Karnataka

ಮಾಜಿ ಸಚಿವ ಎಚ್ ಡಿ ರೇವಣ್ಣ ಬಂಧನವನ್ನು ಖಂಡಿಸಿ ಹಾಗೂ ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಜಾತ್ಯಾತೀತ ಜನತಾದಳದ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯದಾದ್ಯಂತ ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೈಸೂರಿನಲ್ಲೂ ಕೂಡ ಜಿ.ಟಿ. ದೇವೇಗೌಡ ನೇತೃತ್ವದಲ್ಲಿ ಜನತಾದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಮುಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಚು ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಒಂದು ಪಕ್ಷವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಗದಾ ಪ್ರಹಾರ ನಡೆಸಿದ್ದು, ಪೆನ್ ಡ್ರೈವ್ ಪ್ರಕರಣದಲ್ಲಿ ಅಂತರಾಷ್ಟ್ರೀಯ ಜಾಲವೂ ಒಳಗೊಂಡಿದೆ. ಹೀಗಾಗಿ ಕರ್ನಾಟಕ ಪೊಲೀಸರು ಇದನ್ನು ತನಿಖೆ ನಡೆಸಲು ಆಗುವುದಿಲ್ಲ. ಕೂಡಲೇ ಸಿಬಿಐಗೆ ವಹಿಸುವ ಮೂಲಕ ಸತ್ಯಾಂಶ ಬಹಿರಂಗಪಡಿಸಲಿ ಎಂದು ಜಿ.ಟಿ. ದೇವೇಗೌಡ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...