ಬೆಂಗಳೂರು: ಜೆಡಿಎಸ್ ಪಕ್ಷದಿಂದ ಸಿ.ಎಂ. ಇಬ್ರಾಹಿಂ ಉಚ್ಚಾಟನೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿ.ಎಂ. ಇಬ್ರಾಹಿಂ ಅವರ ಅರ್ಜಿ ವಜಾಗೊಳಿಸಲಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿ ಸಿಟಿ ಸಿವಿಲ್ ಕೋರ್ಟ್ ಗೆ ಜೆಡಿಎಸ್ ಮಾಜಿ ಅಧ್ಯಕ್ಷ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷರ ನೇಮಕಾತಿ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.