alex Certify ‘ಮೈಸೂರು ದಸರಾ’ ಉತ್ಸವದಲ್ಲಿ ‘ಏರ್ ಶೋ’ ಆಯೋಜಿಸಲು ರಾಜನಾಥ್ ಸಿಂಗ್ ಗೆ ಸಿಎಂ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೈಸೂರು ದಸರಾ’ ಉತ್ಸವದಲ್ಲಿ ‘ಏರ್ ಶೋ’ ಆಯೋಜಿಸಲು ರಾಜನಾಥ್ ಸಿಂಗ್ ಗೆ ಸಿಎಂ ಮನವಿ

ನವದೆಹಲಿ : ಮೈಸೂರು ದಸರಾ ಉತ್ಸವದಲ್ಲಿ ಏರ್ ಶೋ ಆಯೋಜಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ.

ಇಂದು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಸಲ್ಲಿಸಿದ್ದಾರೆ.ಈ ಬಾರಿಯ ಮೈಸೂರು ದಸರಾ ವೇಳೆ ಏರ್ ಶೋ ನಡೆಸುವ ಚಿಂತನೆ ಇದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಂತೆಯೇ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಂದು ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತದೆ , ಅಕ್ಟೋಬರ್ 15ರಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಆಗುತ್ತೆ.. ವಸ್ತು ಪ್ರದರ್ಶನ ಕೂಡ ಅಂದೇ ಆರಂಭ ಆಗಲಿದೆ,. ಇದೇ ಸಂದರ್ಭದಲ್ಲಿ ಏರ್ ಶೋ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...