alex Certify ಅನೈತಿಕ ಪೊಲೀಸ್ ಗಿರಿಗೆ ಬ್ರೇಕ್: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಸಿಎಂ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನೈತಿಕ ಪೊಲೀಸ್ ಗಿರಿಗೆ ಬ್ರೇಕ್: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಸಿಎಂ ಭರವಸೆ

ಬೆಂಗಳೂರು: ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಟ್ರೋಲ್ ಮಾಡುವವರಿಗೆ, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಾಗಿ ಸಾಹಿತಿಗಳು, ಬರಹಗಾರರು, ಜನಪರ ಸಂಘಟನೆಗಳಿಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಕನ್ನಡ ನಾಡಿನ ಸೌಹಾರ್ದತೆ, ಜಾತ್ಯತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು. ಕನ್ನಡ ಪರ ಹೋರಾಟಗಾರರು, ರೈತರು, ಕಾರ್ಮಿಕರು, ದಲಿತ ಹೋರಾಟಗಾರರ ಮೇಲೆ ಹಾಗೂ ಬರಹಗಾರರ ವಿರುದ್ಧ ದಾಖಲಾದ ಸುಳ್ಳು ಮೊಕದ್ದಮೆ ಹಿಂಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

ಪಠ್ಯ, ಪಾಠಗಳ ಮೂಲಕ ಮಕ್ಕಳ ಮನಸ್ಸು ಕಲುಷಿತಗೊಳಿಸುವ ಕೃತ್ಯ ಸಹಿಸುವುದಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...