alex Certify BIG BREAKING: ‘5 ವರ್ಷ ನಾನೇ ಮುಖ್ಯಮಂತ್ರಿ’ ಹೇಳಿಕೆ ಸಿದ್ಧರಾಮಯ್ಯ ಯುಟರ್ನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ‘5 ವರ್ಷ ನಾನೇ ಮುಖ್ಯಮಂತ್ರಿ’ ಹೇಳಿಕೆ ಸಿದ್ಧರಾಮಯ್ಯ ಯುಟರ್ನ್

ಗದಗ: 5 ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆ ಬಗ್ಗೆ ಯುಟರ್ನ್ ತೆಗೆದುಕೊಂಡಿದ್ದಾರೆ.

ಗದಗದಲ್ಲಿ ಮಾತನಾಡಿದ ಅವರು, ನಾನೊಂದು ಹೇಳಿದರೆ ನೀವೊಂದು ಬರೆಯುತ್ತೀರಿ. ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಹೇಳಿದರೆ ಬದ್ಧ ಎಂದು ಹೇಳಿದ್ದೇನೆ. ನಾನು ನಿನ್ನೆ ಇದನ್ನೇ ಹೇಳಿದ್ದೇನೆ ಎಂದು ಯು ಟರ್ನ್ ತೆಗೆದುಕೊಂಡಿದ್ದಾರೆ.

ಸಚಿವ ಕೆ.ಎನ್. ರಾಜಣ್ಣ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಬಹಿರಂಗವಾಗಿ ಮಾತನಾಡಿದರೆ ಶಿಸ್ತು ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದ ಮರುದಿನವೇ ಮುಖ್ಯಮಂತ್ರಿಗಳು, ಮುಂದಿನ ಐದು ವರ್ಷ ನಮ್ಮದೇ ಸರ್ಕಾರ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಪಕ್ಷದೊಳಗಿನ ತಮ್ಮ ಎದುರಾಳಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ್ದರು.

ಇಂದು ತಮ್ಮ ಹೇಳಿಕೆ ಬಗ್ಗೆ ಯುಟರ್ನ್ ತೆಗೆದುಕೊಂಡು ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದರೆ ಬದ್ಧ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...