alex Certify BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ‘KMF’ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ‘KMF’ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ಕೆಎಂಎಫ್ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಾಲಿನ ದರ ಹೆಚ್ಚಳ ಮಾಡುವ ಸಂಬಂಧ ಇಂದು ಕೆಎಂಎಫ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಿಗದಿಯಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಶೀತ, ಜ್ವರವಿದ್ದ ಕಾರಣ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಾಲಿನ ದರ ಏರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ ಪದಾಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಿಗದಿಯಾಗಿತ್ತು, ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರವಾಗುವ ಸಾಧ್ಯತೆಯಿತ್ತು.ಹಾಲಿನ ದರವನ್ನು ಲೀಟರ್ ಗೆ 5 ರೂ. ಹೆಚ್ಚಿಸಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಇಂದು ಸಂಜೆ 5 :30 ಕ್ಕೆ ಗಂಟೆಗೆ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದರು. ಹೈನು ರಾಸುಗಳ ನಿರ್ವಹಣಾ ವೆಚ್ಚ, ಪಶು ಆಹಾರಗಳ ಬೆಲೆ ಏರಿಕೆಯಿಂದಾಗಿ ಹಾಲು ಉತ್ಪಾದಕರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ 5 ರೂ. ಹೆಚ್ಚಿಸಬೇಕು. ಇಲ್ಲದಿದ್ದರೆ ಹಾಲು ಉತ್ಪಾದಕರು ಹಾಗೂ ಹೈನು ಉದ್ಯಮದ ಅಭಿವೃದ್ಧಿಗೆ ತೊಂದರೆ ಆಗಲಿದೆ ಎಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...