alex Certify BIG NEWS: ಮುಡಾ ಹಗರಣ: ಹೈಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾ ಹಗರಣ: ಹೈಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಬೆಂಗಳೂರು: ಮುಡಾ ಪ್ರಕರಣದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆ ಹೈಕೋರ್ಟ್ ನಲ್ಲಿ ಇಂದು ನಡೆಯಲಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಅವರ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಈಗಾಗಲೇ ಅರ್ಜಿದಾರರಾಗಿರುವ ಸಿಎಂ ಪರ ವಕೀಲರು ಮತ್ತು ಪ್ರತಿವಾದಿಗಳಾಗಿರುವ ರಾಜ್ಯಪಾಲರ ಕಚೇರಿ, ಮೂವರು ಖಾಸಗಿ ದೂರುದಾರರ ಪರ ವಕೀಲರು ವಾದ, ಪ್ರತಿವಾದ ಪೂರ್ಣಗೊಳಿಸಿದ್ದಾರೆ.

ಇಂದು ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಅವರು ಇಂದು ವಾದ ಪೂರ್ಣಗೊಳಿಸಿದರೆ ಸಿಎಂ ಪರ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...