alex Certify ನಾಳೆ ಮಧುಗಿರಿಯಲ್ಲಿ ರಾಜ್ಯಮಟ್ಟದ ‘ಕ್ಷೀರಭಾಗ್ಯ’ ದಶಮಾನೋತ್ಸವ ಕಾರ್ಯಕ್ರಮ : ಸಿಎಂ ಸಿದ್ದರಾಮಯ್ಯ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಮಧುಗಿರಿಯಲ್ಲಿ ರಾಜ್ಯಮಟ್ಟದ ‘ಕ್ಷೀರಭಾಗ್ಯ’ ದಶಮಾನೋತ್ಸವ ಕಾರ್ಯಕ್ರಮ : ಸಿಎಂ ಸಿದ್ದರಾಮಯ್ಯ ಭಾಗಿ

ತುಮಕೂರು : ಸೆ.6ರ ನಾಳೆ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದಲ್ಲಿ ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಸೆ.6ಕ್ಕೆ ಕ್ಷೀರಭಾಗ್ಯ ಜಾರಿಯಾಗಿ 10 ವರ್ಷ ತುಂಬುತ್ತಿರುವ ಹಿನ್ನೆಲೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ವಕ್ಷೇತ್ರದಲ್ಲಿ ಸಮಾರಂಭ ಆಯೋಜಿಸಲಾಗಿದೆ.ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಸಚಿವರು ಭಾಗಿಯಾಗಲಿದ್ದು, ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಜನರನ್ನು ಸೇರಿಸಲು ಯೋಜಿಸಿದ್ದು, ಕಾರ್ಯಕ್ರಮಕ್ಕೆ ಸಿ‍ದ್ದತೆ ನಡೆಯುತ್ತಿದೆ.

ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆ ಜಾರಿಯಾಗಿ ಹತ್ತು ವರ್ಷ ಪೂರೈಸಿದ್ದು, ಈ ಮಹತ್ವದ ಕಾರ್ಯಕ್ರಮ ಉದ್ಘಾಟಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿಗೆ ಆಗಮಿಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: