ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಾಜಿ ಸಿಎಂ ದಿ.ದೇವರಾಜ ಅರಸು ಬಳಸುತ್ತಿದ್ದ ಕಾರಿನಲ್ಲಿ ರೌಂಡ್ಸ್ ಹಾಕಿ ಗಮನ ಸೆಳೆದಿರುವ ಪ್ರಸಂಗ ನಡೆದಿದೆ.
ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ 108ನೇ ಜನ್ಮದಿನ ಹಿನ್ನೆಲೆಯಲ್ಲಿ ವಿಧನಸೌಧದಲ್ಲಿ ದೇವರಾಜ ಅರಸು ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.
ಬಳಿಕ ಅಂದು ದೇವರಾಜ ಅರಸು ಅವರು ಬಳಸುತ್ತಿದ್ದ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ, ವಿಧಾನಸೌಧದ ಆವರಣದಲ್ಲಿ ರೌಂಡ್ಸ್ ಹಾಕಿದ್ದು ವಿಶೇಷವಾಗಿತ್ತು.