alex Certify ಪ್ರತಾಪ್ ಸಿಂಹರನ್ನು ಸಿಎಂ ಟಾರ್ಗೆಟ್ ಮಾಡಿದ್ದಾರೆ: ಭಗವಂತ ಖೂಬಾ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಾಪ್ ಸಿಂಹರನ್ನು ಸಿಎಂ ಟಾರ್ಗೆಟ್ ಮಾಡಿದ್ದಾರೆ: ಭಗವಂತ ಖೂಬಾ ಗಂಭೀರ ಆರೋಪ

ಬೀದರ್ : ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಮ್‌ ಸಿಂಹ ಅವರನ್ನು ಬಂಧಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಪ್ರತಾಪ್‌ ಸಿಂಹರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿಕ್ರಮ್ ಸಿಂಹರನ್ನು ಬಂಧಿಸಿರುವುದು ಕಾನೂನಿನ ವಿರುದ್ಧವಾಗಿದೆ. ಎಫ್‍ಐಆರ್‍ನಲ್ಲಿ ಹೆಸರಿಲ್ಲದಿದ್ದರೂ ಅವರನ್ನು ಬಂಧಿಸಲಾಗಿದೆ. ಈ ಮೂಲಕ ಸಿಎಂ ಸಂಸದ ಪ್ರತಾಪ್ ಸಿಂಹ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು  ಹೇಳಿದ್ದಾರೆ.

ಇದು ಸಿಎಂ ಸಿದ್ದರಾಮಯ್ಯನವರ ಕುತಂತ್ರವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೆಟ್ಟ ಹೆಸರು ತರಲು ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...