alex Certify ಬಜೆಟ್ ಮಂಡಿಸುವ ಮೊದಲೇ ಸಿಎಂಗೆ ಶಾಕ್: ನಿವಾಸದ ಎದುರಲ್ಲೇ ಪಂಚಮಸಾಲಿ ಸಮುದಾಯದಿಂದ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜೆಟ್ ಮಂಡಿಸುವ ಮೊದಲೇ ಸಿಎಂಗೆ ಶಾಕ್: ನಿವಾಸದ ಎದುರಲ್ಲೇ ಪಂಚಮಸಾಲಿ ಸಮುದಾಯದಿಂದ ಪ್ರತಿಭಟನೆ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ನಿವಾಸದ ಎದುರು ಹೋರಾಟ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡನೆ ಮಾಡುವ ಹೊತ್ತಲ್ಲಿ ಸಿಎಂ ನಿವಾಸದ ಎದುರು ಹೈಡ್ರಾಮಾ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಪಂಚಮಸಾಲಿ ಸಮಾಜದ ಮುಖಂಡರು, ಮಹಿಳಾ ಕಾರ್ಯಕರ್ತರು ಮೀಸಲಾತಿ ನೀಡಬೇಕೆಂದು ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಸ್ಥಳದಿಂದ ತೆರಳುವಂತೆ ಪ್ರತಿಭಟನಾಕಾರರ ಮನವೊಲಿಸಲು ಮುಂದಾಗಿದ್ದಾರೆ.

ಸಿಎಂ ಬಜೆಟ್ ಮಂಡನೆಗೆ ಮೊದಲು ದೇವಾಲಯಕ್ಕೆ ತೆರಳಲಿದ್ದು, ಅವರು ಹೊರಡುವ ಮೊದಲೇ ಸ್ಥಳದಿಂದ ಪ್ರತಿಭಟನಾಕಾರರ ಮನವೊಲಿಸಿ ಕಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...