alex Certify ರೈತರಿಗೆ ಸಿಎಂ ಯಡಿಯೂರಪ್ಪರಿಂದ ಮತ್ತೊಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸಿಎಂ ಯಡಿಯೂರಪ್ಪರಿಂದ ಮತ್ತೊಂದು ಸಿಹಿ ಸುದ್ದಿ

ಶಿವಮೊಗ್ಗ: ಈ ಬಾರಿಯೂ ಒಳ್ಳೆಯ ಬಜೆಟ್ ಮಂಡಿಸುತ್ತೇನೆ. ರೈತಪರ ಬಜೆಟ್ ನೀಡಲು ಪ್ರಯತ್ನ ನಡೆಸುವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಿನ್ನೆ ಸಂಜೆ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಆಸ್ಪದವಾಗದಂತೆ, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಕಳಪೆ ಕಾಮಗಾರಿ ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.

ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಿದ್ದೇನೆ. ಕಾಮಗಾರಿಗಳು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಶಿಕಾರಿಪುರ ಮಾದರಿ ತಾಲೂಕು ಮಾಡುವುದು ನನ್ನ ಗುರಿಯಾಗಿದೆ. ಅಧಿಕಾರಿಗಳು ಇದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ನ್ಯಾಯಬದ್ಧವಾಗಿದೆ. ಕಾನೂನೂ ಚೌಕಟ್ಟಿನಲ್ಲಿ ನ್ಯಾಯ ಒದಗಿಸುವ ಮೂಲಕ ಈ ಹೋರಾಟಗಳನ್ನು ತುದಿ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...