alex Certify ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ: ಆಸ್ಪತ್ರೆಗೆ ಯಡಿಯೂರಪ್ಪ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ: ಆಸ್ಪತ್ರೆಗೆ ಯಡಿಯೂರಪ್ಪ ಭೇಟಿ

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 12 ನಿದ್ದೆ ಮಾತ್ರೆ ಸೇರಿಸಿದ ಅವರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಣಾಪಾಯದಿಂದ ಸಂತೋಷ್ ಪಾರಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಶುಕ್ರವಾರ ರಾತ್ರಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅವರು ಅಸ್ವಸ್ಥರಾಗಿದ್ದು, ಅರೆ ಪ್ರಜ್ಞಾವಸ್ಥೆ ತಲುಪಿದ ಸಂತೋಷ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಮಾಹಿತಿ ತಿಳಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ವೈದ್ಯರು ಹಾಗೂ ಸಂತೋಷ್ ಪತ್ನಿಯವರೊಂದಿಗೆ ಮಾತನಾಡಿದ್ದಾರೆ.

ಎರಡು ದಿನಗಳ ಹಿಂದೆ ಅವರು ನನ್ನನ್ನು ಭೇಟಿಯಾಗಿದ್ದರು. ಆತ್ಮಹತ್ಯೆ ಯತ್ನದಿಂದ ನನಗೆ ಆಘಾತವಾಗಿದೆ ಎಂದು ಸಿಎಂ ಹೇಳಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ಮೂಲದವರಾದ ಸಂತೋಷ್ ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಹೊಂದಿದ್ದಾರೆ. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...