alex Certify ನಾಯಕತ್ವ ಬದಲಾವಣೆ: ಕೊನೆಗೂ ಮೌನ ಮುರಿದ ಯಡಿಯೂರಪ್ಪ – ತಮ್ಮ ಪರ ಹೇಳಿಕೆ, ಪ್ರತಿಭಟನೆ ಬೇಡವೆಂದು ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ: ಕೊನೆಗೂ ಮೌನ ಮುರಿದ ಯಡಿಯೂರಪ್ಪ – ತಮ್ಮ ಪರ ಹೇಳಿಕೆ, ಪ್ರತಿಭಟನೆ ಬೇಡವೆಂದು ಮನವಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ಮೌನ ಮುರಿದ ಸಿಎಂ ಯಡಿಯೂರಪ್ಪ ಪಕ್ಷದ ಗೌರವಕ್ಕೆ ಚ್ಯುತಿ ತರಬಾರದು ಎಂದು ಮನವಿ ಮಾಡಿದ್ದಾರೆ.

ಬಿ.ಎಸ್.ವೈ.ಗೆ ಸ್ವಾಮೀಜಿಗಳು ಬೆಂಬಲ ಸೂಚಿಸಿದ್ದಾರೆ. ಸಮುದಾಯದ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಹಲವೆಡೆ ಹೋರಾಟ ಕೂಡ ನಡೆಸಲಾಗಿದೆ.

ಇದೇ ವೇಳೆ ವರಿಷ್ಠರಿಗೆ ಬೇರೆ ಸಂದೇಶ ರವಾನೆಯಾಗುತ್ತಿದೆ ಎಂಬುದನ್ನು ಅರಿತ ಸಿಎಂ ಮೌನ ಮುರಿದು, ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದು ಎಂದು ಮನವಿ ಮಾಡಿದ್ದಾರೆ.

ಅಭಿಮಾನ ಶಿಸ್ತಿನ ವ್ಯಾಪ್ತಿಯನ್ನು ಮೀರಬಾರದು. ಪಕ್ಷ ನನಗೆ ಮಾತೃ ಸಮಾನವಾಗಿದೆ. ಆದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆ ಎಂದು ನಂಬಿರುವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...