alex Certify ಶಿರಾ ಕ್ಷೇತ್ರದಲ್ಲಿ ಡಿಪಾಸಿಟ್ ಕಳೆದುಕೊಳ್ಳುವ ಆತಂಕವಿತ್ತು: ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿರಾ ಕ್ಷೇತ್ರದಲ್ಲಿ ಡಿಪಾಸಿಟ್ ಕಳೆದುಕೊಳ್ಳುವ ಆತಂಕವಿತ್ತು: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಸಮೀಕ್ಷೆಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದು ವರದಿ ಬಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇರಲಿಲ್ಲ. ಡಿಪಾಸಿಟ್ ಕಳೆದುಕೊಳ್ಳುವ ವಾತಾವರಣವಿತ್ತು. ಆದರೆ, ಈಗ ಅಲ್ಲಿಯೂ ಗೆಲ್ಲಲಿದೆ ಎಂದು ಸಮೀಕ್ಷೆಯಲ್ಲಿ ಗೊತ್ತಾಗಿದೆ. ಇದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಅಭಿವೃದ್ಧಿ ಹಿನ್ನೆಲೆಯಲ್ಲಿ ಮತದಾರರು ಬಿಜೆಪಿ ಪರವಾಗಿದ್ದಾರೆ. ವಿರೋಧ ಪಕ್ಷಗಳ ಟೀಕೆಗಳಿಗೆ ಮತದಾರರೇ ಉತ್ತರ ನೀಡಿದ್ದಾರೆ. ಬಿಹಾರದಲ್ಲಿಯೂ ಸಿಎಂ ನಿತೀಶ್ ಕುಮಾರ್ ನೇತೃತ್ವದ ಆಡಳಿತ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಆದರೆ, ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...