![](https://assets-news-bcdn.dailyhunt.in/cmd/resize/4050x2278_90/fetchdata16/images/be/75/13/be75134a48dd62566341942fcf95281b62aa9dd2286ac48b0d36fe6d01562a67.jpg)
ಉರಗ ತಜ್ಞನೊಬ್ಬ ತಾನು ಹಿಡಿದ ಕಾಳಿಂಗ ಸರ್ಪವನ್ನು ಕಾಡಿಗೆ ಬಿಡಲು ತೆಗೆದುಕೊಂಡು ಬೈಕಿನಲ್ಲಿ ಹೋಗುವಾಗಲೇ ಅದು ಕಚ್ಚಿದ್ದು, ಇದರ ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದ್ದು, ಮನೀಶ್ ಎಂಬ ಉರಗತಜ್ಞ ತನ್ನ ಸ್ನೇಹಿತನ ಜೊತೆ ಕಾಳಿಂಗ ಸರ್ಪವನ್ನು ಕೈನಲ್ಲಿ ಹಿಡಿದುಕೊಂಡು ಬೈಕಿನಲ್ಲಿ ಹೋಗುತ್ತಿದ್ದ. ಈ ವೇಳೆ ಅದು ಏಕಾಏಕಿ ಮನೀಶ್ ಗೆ ಕಚ್ಚಿದೆ.
ಇದರಿಂದ ಗಾಬರಿಗೊಂಡ ಆತನ ಸ್ನೇಹಿತ ಬೈಕ್ ನಿಲ್ಲಿಸಲು ಮುಂದಾಗಿದ್ದು, ಅಷ್ಟರೊಳಗಾಗಿ ಮನೀಶ್ ಗೆ ವಿಷ ಏರಿದ್ದ ಪರಿಣಾಮ ಆತ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರೊಳಗಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಅಘಾತಕಾರಿ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.