ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ರಾಜ್ಯಾದ್ಯಂತ ಇದುವರೆಗೆ 1,469 ಪ್ರಕರಣಗಳು ದಾಖಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,469 ಪ್ರಕರಣಗಳು ದಾಖಲಾಗಿವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸಹಾಯವಾಣಿ ಹಾಗೂ ಪೋರ್ಟಲ್ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಾಗುತ್ತಿದೆ. ಸ್ವೀಕರಿಸಿದ ದೂರುಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಮತದಾರರ ಸಹಾಯವಾಣಿ ಮೂಲಕ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿ ಇದುವರೆಗೆ 15,792 ಕರೆಗಳನ್ನು ಸ್ವೀಕರಿಸಲಾಗಿದ್ದು, ಎಲ್ಲ ಕರೆಗಳೂ ವಿಲೇವಾರಿಗೊಂಡಿವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.