alex Certify ‘ಕೃಷಿ ಅಧಿಕಾರಿ’ಗಳಿಂದ ರಾಜ್ಯಪಾಲರಿಗೆ ದೂರು ವಿಚಾರ : ಸಚಿವ ‘ಚೆಲುವರಾಯಸ್ವಾಮಿ’ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೃಷಿ ಅಧಿಕಾರಿ’ಗಳಿಂದ ರಾಜ್ಯಪಾಲರಿಗೆ ದೂರು ವಿಚಾರ : ಸಚಿವ ‘ಚೆಲುವರಾಯಸ್ವಾಮಿ’ ಹೇಳಿದ್ದೇನು..?

ಮಂಡ್ಯ : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ನನಗೆ ಗೊತ್ತಿಲ್ಲ. ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್ ಲೆಟರ್ ಎಂಬ ಮಾಹಿತಿ ನೀಡಿದ್ದಾರೆ ಎಂದರು. ಹಾಗೇನಾದರೂ ಆಗಿದ್ದರೇ ತನಿಖೆ ನಡೆಸಲು ಸೂಚಿಸುತ್ತೇನೆ ಎಂದಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯಜಿಲ್ಲೆಯ ಮಂಡ್ಯ, ಮಳವಳ್ಳಿ, ಕೆ.ಆರ್. ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿತ್ತು.
ಸಚಿವ ಚಲುವರಾಯಸ್ವಾಮಿ ಅವರು 6 ರಿಂದ 8 ಲಕ್ಷ ರೂ.ವರೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...