alex Certify BIG NEWS: ರಜನಿಕಾಂತ್ ರಾಜಕೀಯ ಪಕ್ಷದೊಂದಿಗೆ ಬಿಜೆಪಿ ನಾಯಕರ ನಂಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಜನಿಕಾಂತ್ ರಾಜಕೀಯ ಪಕ್ಷದೊಂದಿಗೆ ಬಿಜೆಪಿ ನಾಯಕರ ನಂಟು

ಚೆನ್ನೈ: ಹಲವಾರು ಬಿಜೆಪಿ ನಾಯಕರು ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪಕ್ಷದೊಂದಿಗೆ ನಂಟು ಹೊಂದಿರುವುದಾಗಿ ಕಾಂಗ್ರೆಸ್ ಆರೋಪ ಮಾಡಿದೆ.

ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ರೀತಿ ಆರೋಪ ಮಾಡಿದ್ದಾರೆ.

ರಜನಿಕಾಂತ್ ಅವರ ಪಕ್ಷ ಇನ್ನೂ ನೋಂದಣಿಯಾಗಿಲ್ಲ. ಅವರ ಪಕ್ಷದ ಉದ್ದೇಶಿತ ಸಿದ್ಧಾಂತ, ಕಾರ್ಯಕ್ರಮ ಏನೆನ್ನುವುದು ತಿಳಿದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಅವರ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆಯೇ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಲಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದಾರೆ.

ಗುರುವಾರವಷ್ಟೇ ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟನೆ ನೀಡಿದ್ದು, ಈ ಕುರಿತಾಗಿ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಪ್ರವೇಶ ಮಾಡಲಿರುವ ರಜನಿಕಾಂತ್ ಅವರ ರಾಜಕೀಯ ಪಕ್ಷದೊಂದಿಗೆ ಅನೇಕ ಬಿಜೆಪಿ ನಾಯಕರು ಸಂಬಂಧ ಹೊಂದಿದ್ದಾರೆ. ರಜನಿ ಅವರ ರಾಜಕೀಯ ಪ್ರವೇಶ ಮತ್ತು  ಪಕ್ಷದೊಂದಿಗೆ ಬಿಜೆಪಿ ನಾಯಕರಿಗೆ ಸಂಬಂಧವಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಜನಿಕಾಂತ್ ಪಕ್ಷದ ಬಗ್ಗೆ ಹೆಚ್ಚಿನ ಮಾಹಿತಿ ಬಂದ ನಂತರ ಪ್ರತಿಕ್ರಿಯೆ ನೀಡಬಹುದು. ಅವರು ಬಿಜೆಪಿಯೊಂದಿಗೆ ಹೋಗಲಿದ್ದಾರೆಯೇ? ಇಲ್ಲವೇ ಎನ್ನುವುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...